spot_imgspot_img
spot_img

ಸರಸ್ವತಿ ಪ್ರಭಾ ಪುರಸ್ಕಾರಕ್ಕೆ ಶ್ರೀಮತಿ ಲಕ್ಷ್ಮೀದೇವಿ ಕಾಮತ್ ಆಯ್ಕೆ

ಕೊಂಕಣಿ ಭಾಷೆ, ಸಾಹಿತ್ಯ, ಕಲೆ, ಲೋಕವೇದ ಇತ್ಯಾದಿ ಕ್ಷೇತ್ರಕ್ಕೆ ಹಾಗೂ ತಮ್ಮ ಸುತ್ತಲ ಸಮಾಜಕ್ಕೆ ಅಪಾರ ದೇಣಿಗೆ, ಸೇವ ನೀಡಿಯೂ, ಕೊಂಕಣಿ ಭಾಷಾ ಸಮೂಹದಿಂದ ಗುರುತಿಸಲ್ಪಡದ ಅಪಾರ ಸಾಧಕರು ಇದ್ದು, ಅವರು ಕೊಂಕಣಿ ಭಾಷೆಗೆ 30 ರಿಂದ 50 ವರ್ಷಗಳ ಕಾಲ ಗಮನಾರ್ಹ ಸೇವೆಯನ್ನು ಸಲ್ಲಿಸಿದರೂ, ನಾನಾ ಕಾರಣಗಳಿಂದ ಅವರು ಪ್ರಶಸ್ತಿ, ಪುರಸ್ಕಾರಗಳಿಂದ ವಂಚಿತರಾಗಿದ್ದಾರೆ. ಕರ್ನಾಟಕದಲ್ಲಿರುವ ಇಂಥಹ ಕೊಂಕಣಿ ಸಾಧಕರನ್ನು ಗುರುತಿಸಿ ಗೌರವಿಸಬೇಕೆನ್ನುವ ಉದ್ದೇಶದಿಂದ ಹುಬ್ಬಳ್ಳಿಯಿಂದ ನಿಯಮಿತವಾಗಿ ಪ್ರಕಟಗೊಳ್ಳುತ್ತಾ ಇದೀಗ ಪ್ರಕಟಣೆಯ 35 ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ನಿಯಮಿತ ಪ್ರಕಟಣೆಯ 36 ನೇ ವರ್ಷಕ್ಕೆ ಪಾದಾರ್ಪಣೆಗೊಂಡಿರುವ ಸರಸ್ವತಿ ಪ್ರಭಾ ಕೊಂಕಣಿ ಮಾಸಿಕ ಪತ್ರಿಕೆಯು 2022 ರಿಂದ ವಯೋವೃದ್ಧ ಕೊಂಕಣಿ ಭಾಷಾ ಸಾಧಕರನ್ನು ಆಯ್ಕೆ ಮಾಡಿ ಸರಸ್ವತಿ ಪ್ರಭಾ ಪುರಸ್ಕಾರವನ್ನು ನೀಡುತ್ತಾ ಬಂದಿದೆ. 2024 ನೇ ಸಾಲಿನಲ್ಲಿ ಈ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಕುಂದಾಪುರದ 75 ವರ್ಷ ಪ್ರಾಯದ ಶ್ರೀಮತಿ ಹಾಲಾಡಿ ಲಕ್ಷ್ಮೀದೇವಿ ವಾಸುದೇವ ಕಾಮತ್ ಅವರನ್ನು ಆಯ್ಕೆ ಮಾಡಲಾಗಿದೆ.

LVK

ಕೊಂಕಣಿ ಲೇಖನ, ಸಂಗೀತ, ನಾಟಕ ರಚನೆ ಮತ್ತು ನಿರ್ದೇಶನ, ಜಾನಪದ ಸಾಹಿತ್ಯಗಳ ಸಂಗ್ರಹದೊಂದಿಗೆ ಕೊಂಕಣಿಯಲ್ಲಿ ಉಪನ್ಯಾಸ, ಭಜನೆ, ಕುಂದಾಪುರ ಪರಿಸರದಲ್ಲಿ ಹಲವಾರು ಕೊಂಕಣಿ ಹಾಗೂ ಇತರ ಸಂಘಟನೆಗಳನ್ನು ಕಟ್ಟಿ ಸಮಾಜ ಸೇವೆ ಇತ್ಯಾದಿ ಹಲವಾರು ಕ್ಷೇತ್ರಗಳಲ್ಲಿ ಕೈಯಾಡಿಸಿ ಗುರುತಿಸಿ ಕೊಂಡಿರುವ ಶ್ರೀಮತಿ ಹಾಲಾಡಿ ಲಕ್ಷ್ಮೀದೇವಿ ಕಾಮತ ಅವರು ಸತತ ಕಳೆದ ಐದು ದಶಕಗಳಿಗಿಂತ ಅಧಿಕ ಸಮಯದಿಂದ ಕೊಂಕಣಿ- ಕನ್ನಡ ಭಾಷೆಗಳೆರಡಕ್ಕೂ ಸೇವೆ ಸಲ್ಲಿಸುತ್ತಾ ಬಂದಿರುತ್ತಾರೆ.

ಅವರ ಹಲವಾರು ಕೊಂಕಣಿ ಕೃತಿಗಳು ಪ್ರಕಟಗೊಂಡಿವೆ. ಅವರು ಸಂಘ-ಸಂಸ್ಥೆಗಳನ್ನೂ ಕಟ್ಟಿ ಪ್ರತಿಭಾ ಪುರಸ್ಕಾರ, ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಪಾರಂಪರಿಕ ಕಲೆ, ಸಂಸ್ಕೃತಿ, ಆಹಾರ, ಸಂಸ್ಕಾರ, ಸಂಸ್ಕೃತಿಗಳ ರಕ್ಷಣೆಗೆ ಸಹಕಾರಿಯಾಗುವಂತಹ ಹಲವಾರ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಆಕಾಶವಾಣಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಹಲವಾರು ಸಮಾವೇಶ, ಗೋಷ್ಟಿಗಳಲ್ಲಿ ಭಾಗವಹಿಸಿ ವಿಚಾರ ಮಂಡಿಸಿದ್ದಾರೆ. ನಾಡಿನ ಹಲವಾರು ಕೊಂಕಣಿ, ಕನ್ನಡ ಪತ್ರಿಕೆಗಳಲ್ಲಿ ಇವರ ಲೇಖನ, ಕವನಗಳು ಪ್ರಕಟಗೊಂಡಿವೆ.

ಸರಸ್ವತಿ ಪ್ರಭಾ ಪುರಸ್ಕಾರ 2024 ಕ್ಕೆ ಆಯ್ಕೆಯಾದ ಶ್ರೀಮತಿ ಹಾಲಾಡಿ ಲಕ್ಷ್ಮೀದೇವಿ ವಾಸುದೇವ ಕಾಮತ, ಕುಂದಾಪುರ ಇವರಿಗೆ ಸರಸ್ವತಿ ಪ್ರಭಾ ಪತ್ರಿಕೆಯ ವತಿಯಿಂದ ಶಾಲು, ಸ್ಮರಣಿಕೆ, ಹಾರ, ಸನ್ಮಾನ ಪತ್ರ, ಫಲತಾಂಬೂಲ ಹಾಗೂ ರೂ. 5,001/-(ರೂ. ಐದು ಸಾವಿರದ ಒಂದು) ಗಳ ನಗದು ಹಣದೊಂದಿಗೆ ಸದ್ಯದಲ್ಲಿಯೇ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸರಸ್ವತಿ ಪ್ರಭಾ ಪತ್ರಿಕೆಯ ಸಂಪಾದಕರಾದ ಆರಗೋಡು ಸುರೇಶ ಶೆಣೈಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2022 ರ ಸಾಲಿನಲ್ಲಿ 25 ಕ್ಕಿಂತ ಅಧಿಕ ಸಾಹಿತ್ಯ ಕೃತಿಗಳನ್ನು ಬರೆದ (ಅವುಗಳಲ್ಲಿ 6 ಕೊಂಕಣಿ ಕೃತಿಗಳು) ಬೆಂಗಳೂರಿನ ಕೊಂಕಣಿ ಸಹಿತ ಕನ್ನಡ, ಇಂಗ್ಲೀಷ್, ಹಾಗೂ ಹಿಂದಿ ಸೇರಿ ಚತುರ್ಭಾಷಾ ಸಾಹಿತಿ 80 ಕ್ಕಿಂತ ಅಧಿಕ ವಯಸ್ಸಾದ ವಯೋವೃದ್ಧ ಡಾ|| ಮೋಹನ ಜಿ. ಶೆಣೈ ಮತ್ತು ಕೊಂಕಣಿ ಸಾಹಿತ್ಯ ಹಾಗೂ ರಂಗಕಲೆಗೆ ಅಪಾರ ಸೇವೆ ಸಲ್ಲಿಸಿ, ಕೊಂಕಣಿ ಹಾಗೂ ಕನ್ನಡ ಭಾಷೆಯಲ್ಲಿ 30 ಕ್ಕಿಂತ ಅಧಿಕ ನಾಟಕಗಳನ್ನು ಬರೆದ 75 ವರ್ಷ ವಯಸ್ಸಿನ ಶಿರಸಿಯ ಶ್ರೀ ಅನಿಲ ಪೈ ಇವರಿಗೆ, 2023 ನೇ ಸಾಲಿನಲ್ಲಿ ಕೊಂಕಣಿಯ ಹೆಸರಾಂತ ಬರಹಗಾರ್ತಿ, ಕೊಂಕಣಿ ಜಾನಪದ ಸಾಹಿತ್ಯ ರಕ್ಷಕಿಯಾದ 8 ಕೊಂಕಣಿ ಕೃತಿಗಳನ್ನು ಪ್ರಕಟಿಸಿರುವ 77 ವರ್ಷ ವಯಸ್ಸಿನ ಶಿರಸಿಯ ಶ್ರೀಮತಿ ಜಯಶ್ರೀ ನಾಯಕ ಎಕ್ಕಂಬಿ ಇವರಿಗೆ ಸರಸ್ವತಿ ಪ್ರಭಾ ಪುರಸ್ಕಾರವನ್ನು ಪ್ರಧಾನ ಮಾಡಲಾಗಿದೆ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Support Free & Independent Media

Keep journalism alive – support free, independent media. Help us to do our work by making a contribution. Together, stronger. Together as one.

LEAVE A REPLY

Please enter your comment!
Please enter your name here

Kittall Media Network
KITTALL is a unique Konkani literary website. It is the dream project of well-known Konkani writer and critic Henry Mendonca popularly known as H M Pernal. Kittall carries short stories , poems , essays , novel series, columns by reknowned writers, interview with writers and artists , videos, review on new books , music and art . It also publishes Special reports of Konkani events and news related to konkani literature , art and music. KITTALL was inaugurated on 5th February 2011 by celebrated Konkani poet , President , Kavita Trust and Director (operations) of Daijiworld Media Private Limited, Mr. Melvyn Rodrigues.