spot_imgspot_img
spot_img

ಮಂಗಳೂರಿನಲ್ಲಿ ಸಾಹಿತ್ಯ ಅಕಾಡೆಮಿಯಿಂದ ‘ಕವಿಸಂಧಿ’

ಸಾಹಿತ್ಯ ಅಕಾಡೆಮಿ, ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ಹಾಗೂ ಕವಿತಾ ಟ್ರಸ್ಟ್ ವತಿಯಿಂದ ಇಲ್ಲಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ ಭಾನುವಾರ (ಮೇ 26) ‘ಕವಿಸಂಧಿ’ ಕಾರ್ಯಕ್ರಮ ನಡೆಯಿತು.  ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಖ್ಯಾತ ಕೊಂಕಣಿ ಕವಿ ನೀಲ್ಬಾ ಖಂಡೇಕಾರ್ ಕವಿಯಾಗಿ ಭಾಗವಹಿಸಿ ಕವಿತೆ ಮತ್ತು ವಿಚಾರಗಳನ್ನು ಪ್ರಸ್ತುತಪಡಿದರು.

NK36

NK17

NK20

NK9

NK14

NK15

ಕಾವ್ಯ ಕ್ಷೇತ್ರದಲ್ಲಿನ ತಮ್ಮ ಪಯಣವನ್ನು ವಿವರಿಸುತ್ತಾ ನೀಲ್ಬಾ ಖಂಡೇಕರ್ ಅವರು, “ನನ್ನಲ್ಲಿ ಬರವಣಿಗೆಯ ಪ್ರತಿಭೆ ಇತ್ತು. ಈ ಪ್ರತಿಭೆಯ ಜೊತೆಗೆ ನಾನು ಜೀವನದ ಸತ್ಯಗಳನ್ನು ಅರಿತು ಸಾಹಿತ್ಯ ರಚನೆಯಲ್ಲಿ ತೊಡಗಿಕೊಂಡಾಗ ನನ್ನ ಬರವಣಿಗೆಯನ್ನು ಸಾಹಿತ್ಯಾಸಕ್ತರು ಗುರುತಿಸಲು ಆರಂಭಿಸಿದರು. ನನ್ನಲ್ಲಿದ್ದ ಓದುವಿಕೆಯ ಅಭ್ಯಾಸವು ನನಗೆ ಪ್ರಪಂಚದ ಆಗುಹೋಗುಗಳ ಬಗ್ಗೆ ಮಾಹಿತಿಯನ್ನು ನೀಡಿತು. ಇದರ ಫಲವಾಗಿ ನನ್ನ ಕೃತಿಗಳಲ್ಲಿ ಚಾರಿತ್ರಿಕ ಘಟನೆಗಳನ್ನು ಮತ್ತು ಪ್ರಚಲಿತ ವಿದ್ಯಮಾನಗಳನ್ನು ಪ್ರತಿಬಿಂಬಿಸಲು ಸಾಧ್ಯವಾಯಿತು.ಈ ಪ್ರಕಾರ ನಾನು ಸಮಾಜದ ಆಗುಹೋಗುಗಳ ಒಳಿತು ಮತ್ತು ದೋಷಗಳನ್ನು ಓದುಗರ ಮುಂದೆ ತಲುಪಿಸಲು ಮುಂದಾದೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಘಟನೆಗಳನ್ನು ಅಧ್ಯಯನ ಮಾಡಲು ಪ್ರಾರಂಭಿಸಿದಾಗ, ಪ್ರಗತಿಪರ ಚಿಂತನೆ ಮತ್ತು ಮೂಲಭೂತ ಆಚರಣೆಗಳ ನಡುವಿನ ವ್ಯತ್ಯಾಸವನ್ನು ನಾನು ಅರಿತುಕೊಂಡೆ. ಜೊತೆಗೆ ಮಹಾತ್ಮ ಗಾಂಧಿಯವರ ಬೋಧನೆಗಳು ನನ್ನ ಮೇಲೆ ಬಹಳ ಪ್ರಭಾವ ಬೀರಿದವು. ದಾಭೋಲ್ಕರ್, ಗೌರಿ ಲಂಕೇಶ್ ಮತ್ತು ಎಂ ಎಂ ಕಲಬುರ್ಗಿನ್ನು ಅರಗಿಸಿಕೊಂಡದ್ದು ನನ್ನ ಸಾಹಿತ್ಯ ಜೀವನದ ಮೈಲುಗಲ್ಲು ಎಂದು ಹೇಳಲು ನನಗೆ ಹೆಮ್ಮೆಯಿದೆ ” ಎಂದು ಹೇಳಿದರು

NK13

NK16

NK31

ಇದೇ ಸಂದರ್ಭದಲ್ಲಿ ಮಾತನಾಡಿದ ನಂದಗೋಪಾಲ್ ಶೆಣೈ ಕವಿಸಂಧಿ ಕಾರ್ಯಕ್ರಮಕ್ಕೆ ವಿಶ್ವ ಕೊಂಕಣಿ ಕೇಂದ್ರವನ್ನು ಆಯ್ಕೆ ಮಾಡಿದ್ದಕ್ಕಾಗಿ ಸಾಹಿತ್ಯ ಅಕಾಡೆಮಿಗೆ ಧನ್ಯವಾದ ಅರ್ಪಿಸಿದರು.

NK7

NK3

NK4

NK5

ಸಾಹಿತ್ಯ ಅಕಾಡೆಮಿ, ಕೊಂಕಣಿ ವಿಭಾಗದ ಸಂಚಾಲಕರಾದ ಮೆಲ್ವಿನ್ ರೊಡ್ರಿಗಸ್, ಅವರು ಸಭೆಯನ್ನು ಸ್ವಾಗತಿಸಿ, ನೀಲ್ಬಾ ಖಂಡೇಕರ್ ಅವರನ್ನು ಸಭಿಕರಿಗೆ ಪರಿಚಯಿಸಿದರು. ಕೊಂಕಣಿ ಸಾಹಿತ್ಯ ಅಕಾಡೆಮಿಯ ಸಲಹಾ ಮಂಡಳಿಯ ಸದಸ್ಯರಾದ ಹೆಚ್ ಎಂ ಪೆರ್ನಾಳ್ ಅವರು ಸಂವಾದ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ನೀಲ್ಬಾ ಅವರೊಂದಿಗೆ ಖ್ಯಾತ ಕೊಂಕಣಿ ಕವಯಿತ್ರಿ ಸ್ಮಿತಾ ಶೆಣೈ ಚರ್ಚೆಯಲ್ಲಿ ಭಾಗವಹಿಸಿದ್ದರು.

NK22

NK23

NK25

NK26

NK29

NK30

NK34

ಕವಿತಾ ಟ್ರಸ್ಟ್‌ನ ಅಧ್ಯಕ್ಷರಾದ ಕಿಶೂ ಬಾರ್ಕೂರು, ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ಹಾಗೂ ಕವಿತಾ ಟ್ರಸ್ಟ್ ನ ಟ್ರಸ್ಟಿಗಳು ಹಾಗೂ ಕೊಂಕಣಿ ಸಾಹಿತಾಸಕ್ತರು ಕಾರ್ಯಕ್ರದಲ್ಲಿ ಭಾಗವಹಿಸಿದರು. ಸಾಹಿತ್ಯ ಅಕಾಡೆಮಿಯ ಕೊಂಕಣಿ ಸಲಹಾ ಮಂಡಳಿಯ ಸದಸ್ಯರಾದ ಸ್ಟ್ಯಾನಿ ಬೇಳ ಕಾರ್ಯಕ್ರಮವನ್ನು ನಿರೂಪಿಸಿದರು.

ಚಿತ್ರ : ಅಲ್ಪೋನ್ಸ್, ಪಾಂಗ್ಳಾ

Support Free & Independent Media

Keep journalism alive – support free, independent media. Help us to do our work by making a contribution. Together, stronger. Together as one.

LEAVE A REPLY

Please enter your comment!
Please enter your name here

Kittall Media Network
KITTALL is a unique Konkani literary website. It is the dream project of well-known Konkani writer and critic Henry Mendonca popularly known as H M Pernal. Kittall carries short stories , poems , essays , novel series, columns by reknowned writers, interview with writers and artists , videos, review on new books , music and art . It also publishes Special reports of Konkani events and news related to konkani literature , art and music. KITTALL was inaugurated on 5th February 2011 by celebrated Konkani poet , President , Kavita Trust and Director (operations) of Daijiworld Media Private Limited, Mr. Melvyn Rodrigues.